ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಜಾಗದಲ್ಲಿರುವ ಅಕ್ರಮ ಕಟ್ಟಡ ತೆರವುಗೊಳಿಸಲು ತತ್ಕ್ಷಣ ಕಾರ್ಯಾಚರಣೆ ಪ್ರಾರಂಭಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.ದ.ಕ. ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಜರಗಿದ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಜಾಗದಲ್ಲಿ ಯಾವುದೇ ಅನಧಿಕೃತ ಕಟ್ಟಡಗಳು, ಅಂಗಡಿಗಳು ನಿರ್ಮಾಣವಾಗದಂತೆ ಇಲಾಖೆಯ ಅಧಿಕಾರಿಗಳು ನಿಗಾವಹಿಸಬೇಕು ಹಾಗೂ ಈಗಾಗಲೇ ಇರುವ ಅಕ್ರಮ ಕಟ್ಟಡಗಳು, ಅಂಗಡಿಗಳನ್ನು ತೆರವುಗೊಳಿಸಲು ಕೂಡಲೇ ಕ್ರಮಕೈಗೊಳ್ಳಬೇಕು.
ವಾಹನಗಳು ಸಂಚಾರಿ ಕ್ಯಾಂಟೀನ್ಗಳು ಹೆದ್ದಾರಿ ಅಕ್ಕಪಕ್ಕಗಳಲ್ಲಿ 1 ಗಂಟೆಗಿಂತ ಹೆಚ್ಚು ಹೊತ್ತು ತಂಗಲು ಅವಕಾಶ ನೀಡಬಾರದು ಎಂದು ನಿರ್ದೇಶನ ನೀಡಿದರು.