Thursday 28th, March 2024
canara news

ಯಾವುದೇ ಗ್ರಾಮದ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಸಚಿವ ರೈ

Published On : 07 Jul 2016   |  Reported By : Canaranews Network


ಮಂಗಳೂರು: ಡಾ| ಕಸ್ತೂರಿರಂಗನ್ ವರದಿ ವ್ಯಾಪ್ತಿಗೆ ಒಳಪಡುವ ಯಾವುದೇ ಗ್ರಾಮದ ರೈತರನ್ನು ಸರಕಾರ ಒಕ್ಕೆಲೆಬ್ಬಿಸುವುದಿಲ್ಲ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ.ಡಾ| ಕಸ್ತೂರಿ ರಂಗನ್ ವರದಿ ಬಗ್ಗೆ ಅರಣ್ಯ ಇಲಾಖೆ ಕೈಗೊಂಡಿರುವ ಅಂತಿಮ ನಿರ್ಣಯದ ಕುರಿತು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ'ಸೋಜಾ ಅವರ ಪ್ರಶ್ನೆಗೆ ಲಿಖೀತ ಉತ್ತರ ನೀಡಿರುವ ಸಚಿವ ರೈ, ಕಸ್ತೂರಿ ರಂಗನ್ ವರದಿಯಿಂದ ಡೀಮ್ಡ್ ಫಾರೆಸ್ಟ್ ಪ್ರದೇಶಗಳಲ್ಲಿ ವಾಸಿಸುವ ಯಾವುದೇ ಕುಟುಂಬಗಳನ್ನು ಒಕ್ಕೆಲೆಬ್ಬಿಸುವ ಪ್ರಯತ್ನ ಇರುವುದಿಲ್ಲ.

ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ಒಕ್ಕೆಲೆಬ್ಬಿಸಬಾರದು ಎಂದು 2015ರ ಮಾ. 13ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ. ಅರಣ್ಯ ಜಮೀನನ್ನು ಅಕ್ರಮಸಕ್ರಮದಡಿ ಕ್ರಮಬದ್ದಗೊಳಿಸಲು ಅವಕಾಶವಿರುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here