ಮಂಗಳೂರು: ಮಂಗಳೂರಿನ ಪಿವಿಎಸ್ ಕಲಾಕುಂಜದಲ್ಲಿ ದುಷ್ಕರ್ಮಿಗಳಿಂದ ಮಾ.೨೧ರಂದು ಹತ್ಯೆಗೀಡಾದ ಆರ್ ಟಿ ಐ ಕಾರ್ಯಕರ್ತ ವಿನಾಯಕ್ ಬಾಳಿಗ ಅವರ ನಿವಾಸಕ್ಕೆ ಪೊಲೀಸ್ ಕಮಿಷನರ್ ಚಂದ್ರಶೇಖರ್ ಭೇಟಿ ನೀಡಿ, ಒಂದು ಗಂಟೆಗಳ ಕಾಲ ಬಾಳಿಗ ಕುಟುಂಬದ ಜೊತೆ ಮಾತುಕತೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಕುರಿತು ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದರು. ಎಸಿಪಿ ಇನ್ಸ್ ಪೆಕ್ಟರ್ ಗಳ ವರ್ಗಾವಣೆಯಿಂದ ತನಿಖೆಯ ಮೇಲೆ ಯಾವುದೆ ಪರಿಣಾಮ ಬೀರುವುದಿಲ್ಲ. ತನಿಖೆಯ ಹಾದಿ ತಪ್ಪುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಭೇಟಿ ಸಂದರ್ಭ ಬರ್ಕೆ ಠಾಣಾ ಇನ್ಸ್ ಪೆಕ್ಟರ್ ರಾಜೇಶ್ ಹಾಗೂ ವಿಚಾರವಾದಿ ನರೇಂದ್ರ ನಾಯಕ್ ಉಪಸ್ಥಿತರಿದ್ದರು.