ಮಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಸಂಬಂಧ ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ಧನ ಪೂಜಾರಿ ಸಿಎಂ ಸಿದ್ದರಾಮಯ್ಯರನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಗಳೂರಿನಲ್ಲಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಬಗ್ಗೆ ಜನರಿಗೆ ಜಿಗುಪ್ಸೆ ಉಂಟಾಗಿದೆ.
ಸಿದ್ದರಾಮಯ್ಯ ಪಕ್ಷವನ್ನು ಕೊಲ್ಲುತ್ತಿದ್ದಾರೆ. ಸಿದ್ದರಾಮಯ್ಯನವರೇ ನಿಮಗೆ ಪಕ್ಷದ ಮೇಲೆ ಅಭಿಮಾನ ಇದ್ದರೆ ಕೂಡಲೇ ರಾಜೀನಾಮೆಯನ್ನ ನೀಡಿ ಎಂದು ಅವರು ಹೇಳಿದರು. ಸಿದ್ದರಾಮಯ್ಯ ಸಚಿವರು, ಪೊಲೀಸ್ ಅಧಿಕಾರಿಗಳನ್ನು ರಕ್ಷಿಸುತ್ತಿದ್ದಾರೆ. ಕಾಂಗ್ರೆಸ್ ಉಳಿವಿಗಾಗಿ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.