ಮಂಗಳೂರು: ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗೇರುಕೆಟ್ಟೆ ಸಮೀಪ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬುಧವಾರ ರಾತ್ರಿ ವೇಳೆ ಬೆಳ್ತಂಗಡಿ ವೃತ್ತ ನಿರೀಕ್ಷಕ ನೇಮಿರಾಜ್ ಮತ್ತು ತಂಡ ವಾಹನ ತಪಾಸಣೆ ನಡೆಸುತ್ತಿದ್ದಾಗ ಪಿಕಪ್ ವಾಹನ ನಿಲ್ಲಿಸದೆ ಹೋಗುತ್ತಿರುವುದನ್ನು ಗಮನಿಸಿ ಬೆನ್ನಟ್ಟಿದಾಗ ವಾಹನವನ್ನು ಬದಿಯಲ್ಲಿ ಬಿಟ್ಟು ಚಾಲಕ ಹಾಗೂ ವಾಹನದಲ್ಲಿದ್ದವರು ಪರಾರಿಯಾಗಿದ್ದಾರೆ.
ಪಿಕಪ್ ವಾಹನವನ್ನು ಪರಿಶೀಲಿಸಿದಾಗ ಅಕ್ರಮವಾಗಿ ದನಗಳನ್ನು ತುಂಬಿ ಸಾಗಾಟ ಮಾಡುತ್ತಿರೋದು ಪತ್ತೆಯಾಗಿದೆ. ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.