ಮಂಗಳೂರು: ಕೇಂದ್ರ ಸರಕಾರದ ನಗರಾಭಿವೃದ್ಧಿ ಸಚಿವಾಲಯದ ವತಿಯಿಂದ ಸ್ವಚ್ಛ ಭಾರತ್ ಮಿಷನ್ನಡಿಯಲ್ಲಿ ಸ್ವಚ್ಛ ನಗರಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರಕಿದೆ. ಕಳೆದ ವರ್ಷ ದೇಶದಲ್ಲಿಯೇ ಮೂರನೇ ಸ್ಥಾನ ಪಡೆದಿದ್ದ ಮಂಗಳೂರು 2017ರಲ್ಲಿ ಮೊದಲ ಸ್ಥಾನ ಪಡೆದುಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ಪೂರ್ವಸಿದ್ಧತೆಗಳನ್ನು ಆರಂಭಿಸಿದೆ.ಸ್ವಚ್ಛ ಭಾರತ ಮಿಷನ್ ಅನುಷ್ಠಾನದಲ್ಲಿ 'ಸ್ವಚ್ಛ ಸರ್ವೇಕ್ಷಣ- 2017'ರ ಕುರಿತು ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೈಗೊಳ್ಳಬೇಕಾಗಿರುವ ಕ್ರಮದ ಕುರಿತು ಮೇಯರ್ ಹರಿನಾಥ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
2016ರ ಸ್ವಚ್ಛ ಭಾರತ ಸರ್ವೇಕ್ಷಣೆಯಲ್ಲಿ ಮೈಸೂರು ದೇಶದ ನಂ. 1 ಸ್ವಚ್ಛ ನಗರವಾಗಿ ಆಯ್ಕೆಯಾಗಿದ್ದರೆ, ಮಂಗಳೂರು ದೇಶದ 476 ನಗರಗಳ ಪೈಕಿ ಮೂರನೇ ಶ್ರೇಯಾಂಕ ಪಡೆದಿತ್ತು.