ಮುಂಬಯಿ, ಜು. 23: ಉಡುಪಿ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅವರು ಇಂದು ಭಾನುವಾರ (ದಿನಾಂಕ ಜುಲಾಯಿ.24) ಅಂಧೇರಿ ಪಶ್ಚಿಮದ ಎಸ್.ವಿ.ರೋಡ್ನ ಇರ್ಲಾ ಅಲ್ಲಿನ ಶ್ರೀ ಅದಮಾರು ಮಠದಲ್ಲಿ ಪ್ರಾತಃಕಾಲ 9:00 ರಿಂದ 12:00 ತನಕ ತಪ್ತ ಮುದ್ರಾ ಧಾರಣೆಯನ್ನು ನೆರವೇರಿಸಲಿರುವರು.
ಆ ಪ್ರಯುಕ್ತ ಮಹಾನಗರದಲ್ಲಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸರ್ವ ಪೂಜಾಧಿಗಳಲ್ಲಿ ಪಾಲ್ಗೊಂಡು ಮುದ್ರಾ ಧಾರಣಾ ಸದುಪಯೋಗ ಪಡೆದು ತೀರ್ಥ ಪ್ರಸಾದವನ್ನು ಸ್ವೀಕರಿಸಿ ಸ್ವಾಮೀಜಿ ಅವರ ಹಾಗೂ ಭಗವದನುಗ್ರಕ್ಕೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ವಿವರಕ್ಕಾಗಿ ಬಿಎಸ್ಕೆಬಿ ಅಸೋಸಿಯೇಶನ್ ಸಯಾನ್ (ದೂರವಾಣಿ-24094061) ಇದರ ಪದಾಧಿಕಾರಿಗಳು ಅಥವಾ ಶ್ರೀ ಅದಮಾರು ಮಠ ಮುಂಬಯಿ ಶಾಖೆಯ ವ್ಯವಸ್ಥಾಪಕ ಪಡುಬಿದ್ರಿ ವಿ.ರಾಜೇಶ್ ರಾವ್ (ದೂರವಾಣಿ-26206623) ಸಂಪರ್ಕಿಸುವಂತೆ ವಿನಂತಿಸಿದ್ದಾರೆ.