Tuesday 16th, April 2024
canara news

ದ.ಕ. ಜಿಲ್ಲಾ ನಿರ್ಗಮನ ಜಿಲ್ಲಾಧಿಕಾರಿ ಕಾರು ಅಪಘಾತ

Published On : 24 Jul 2016   |  Reported By : Canaranews Network


ಮಂಗಳೂರು: ದ.ಕ.ಜಿಲ್ಲೆಯ ನಿರ್ಗಮನ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರ ಕಾರು ಶನಿವಾರ ಅಪಘಾತಕ್ಕೀಡಾಗಿದೆ. ಎ.ಬಿ.ಇಬ್ರಾಹಿಂ ಅವರು ತಮ್ಮ ಪತ್ನಿ ಜೊತೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಕಡೆಗೆ ಫಾರ್ಚುನರ್ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಸಂದರ್ಭ ಸುಳ್ಯದ ಉದನೆ ಗುಂಡ್ಯ ಸಮೀಪದ ನೆಲ್ಯಾಡಿ ಹೊರವಲಯದಲ್ಲಿ ಸ್ಕಾರ್ಪಿಯೋ ಕಾರು ನದುವೆ ಅಪಘಾತಕ್ಕೀಡಾಗಿ ಅವರು ಗಾಯಗೊಂಡಿದ್ದಾರೆ.

ಅಪಘಾತದ ಪರಿಣಾಮ ಸ್ಕಾರ್ಪಿಯೋ ಕಾರಿನಲ್ಲಿದ್ದ ತಮಿಳುನಾದು ಮೂಲದ ಐವರು ಗಾಯಗೊಂಡಿದ್ದಾರೆ.ಗಾಯಗೊಂಡವರಲ್ಲಿ ಅರವಿಂದ್ ಹಾಗೂ ಮಹಾದೇವ್ ಇಬ್ಬರು ಗುರುತು ಪತ್ತೆಯಾಗಿದೆ. ಫಾರ್ಚುನರ್ ಕಾರಿನಲ್ಲಿದ್ದ ಎ.ಬಿ.ಇಬ್ರಾಹಿಂ ಮತ್ತು ಅವರ ಪತ್ನಿಗೂ ಗಾಯಗಳಾಗಿದ್ದು,ಅವರನ್ನು ಯುನಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here