ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ವತಿಯಿಂದ ಪಂಜೆ ಮಂಗೇಶರಾಯ ಅನುಸಂಧಾನ ಕಾರ್ಯಕ್ರಮ ನಗರದ ರಥಬೀದಿ ಹೆಮ್ಮಕ್ಕಳ ಪ್ರೌಢಶಾಲೆಯಲ್ಲಿ ನಡೆಯಿತು. ಜಿಲ್ಲಾ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಸಾಮಾರಂಭವನ್ನು ಉದ್ಘಾಟಿಸಿದರು. ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ಅಧ್ಯಕ್ಷತೆ ವಹಿಸಿದ್ದರು. ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ರಾಜೀವಿ ಕೆ. ಸಾರಸ್ವತ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಮಹೇಶ್ ಬೊಂಡಾಲ, ಸಾಹಿತಿ ರಘು ಇಡ್ಕಿದು, ಮತ್ತಿತರರು ಉಪಸ್ಥಿತರಿದ್ದರು.
ವಿಜಯಲಕ್ಷ್ಮೀ ಬಿ. ಶೆಟ್ಟಿ ಸ್ವಾಗತಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಜರಗಿತು.