ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯು ನಗರದ ಅಭಿವೃದ್ಧಿಯ ನಿಟ್ಟಿನಲ್ಲಿ ಆನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನದ ಬದ್ಧತೆಯನ್ನು ಮೆರೆದಿದೆ ಎಂದು ರಾಜ್ಯ ಅರಣ್ಯ, ಪರಿಸರ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರುಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಮಂಗಳೂರಿನಲ್ಲಿ ಆದಿತ್ಯವಾರ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಬಳಿಕ ಸರ್ಕ್ಯೂಟ್ ಹೌಸ್ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.ಪಾಲಿಕೆ ವತಿಯಿಂದ ಪುರಭವನದಲ್ಲಿ ಭೋಜನಗೃಹ, ಅಳಕೆ ಮತ್ತು ಕಾವೂರಿನಲ್ಲಿ ಮಾರುಕಟ್ಟೆ ನಿರ್ಮಾಣ ಹಾಗೂ ಕಾವೂರು ಜಂಕ್ಷನ್ ಅಭಿವೃದ್ಧಿ ಮುಂತಾದ ಕಾಮಗಾರಿಗಳಿಗೆ ಇಂದು ಶಿಲಾನ್ಯಾಸ ಮಾಡಲಾಗಿದೆ.
ರಾತ್ರಿ ವಸತಿರಹಿತ ನಾಗರಿಕರಿಗೆ ಬಂದರಿನಲ್ಲಿ ನಿರ್ಮಿಸುತ್ತಿರುವ ವಸತಿ ವ್ಯವಸ್ಥೆಯ ನೆಲಅಂತಸನ್ನು ಉದ್ಘಾಟಿಸಲಾಗಿದೆ. ಮಹಾನಗರದ ಸಮಗ್ರ ಅಭಿವೃದ್ಧಿಗೆ ಪಾಲಿಕೆ ಹಲವಾರು ಯೋಜನೆಗಳನ್ನು ಈಗಾಗಲೇ ಅನುಷ್ಠಾನಗೊಳಿಸಿದೆ ಎಂದು ಅವರು ಹೇಳಿದ್ದಾರೆ.ಈ ಸಂದರ್ಭ ಶಾಸಕ ಜೆ.ಆರ್. ಲೋಬೋ, ಮೇಯರ್ ಹರಿನಾಥ್ ಮೊದಲಾದವರು ಉಪಸ್ಥಿತರಿದ್ದರು.