ಮಂಗಳೂರು: ಮಂಗಳೂರು-ಶಾರ್ಜಾ ನಡುವಣ ಜೆಟ್ ಜೆಟ್ ಏರ್ವೇಸ್ನ ನೇರ ವಿಮಾನಯಾನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರವಿವಾರ ಆರಂಭವಾಯಿತು.
ಮುಖ್ಯ ಅತಿಥಿಯಾಗಿದ್ದ ನಿಟ್ಟೆ ಶಿಕ್ಷಣ ಟ್ರಸ್ಟ್ನ ಅಧ್ಯಕ್ಷ ಎನ್. ವಿನಯ ಹೆಗ್ಡೆ ಅವರು ಮಂಗಳೂರು-ಶಾರ್ಜಾ ನೇರವಿಮಾನ ಯಾನದ ದೀರ್ಘಕಾಲದ ಕನಸು ನನಸಾಗಿದೆ ಎಂದರು.ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಪ್ರಯಾಣಿಕರಿಗೆ ವಿಶೇಷ ಸೌಲಭ್ಯ ಒದಗಿಸುವ ಮೂಲಕ ಜೆಟ್ ಏರ್ವೆಸ್ ಯಶಸ್ಸು ಸಾಧಿಸಿದೆ ಎಂದು ಶ್ಲಾಘಿಸಿದರು.
ಮಂಗಳೂರು ಅಂ.ವಿ. ನಿಲ್ದಾಣದ ಸಮಗ್ರ ಬೆಳವಣಿಗೆ ಗಮನಾರ್ಹವೆಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಜೆಟ್ಏರ್ವೆಸ್ ಸಂಸ್ಥೆಯು ಮತ್ತಷ್ಟು ಹೊಸ ಯಾನಗಳನ್ನು ಆರಂಭಿಸಲೆಂದು ಸಚಿವ ಯು.ಟಿ. ಖಾದರ್ ಹಾರೈಸಿದರು.