Thursday 25th, April 2024
canara news

ತಾಯಿ- ಮಗುವನ್ನು ಬರ್ಬರವಾಗಿ ಹತ್ಯೆಗೈದಾತನಿಗೆ ಮರಣ ದಂಡನೆ

Published On : 13 Aug 2016   |  Reported By : Canaranews Network


ಮಂಗಳೂರು: ೨೦೦೮ರಲ್ಲಿ ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನ ನೆಲ್ಯಾಡಿ ಶಿರಾಡಿಯಲ್ಲಿ ನಡೆದಿದ್ದ ತಾಯಿ ಮತ್ತು ಮಗುವಿನ ಬರ್ಬರ ಹತ್ಯೆಯನ್ನು ಘೋರ ಅಪರಾಧ ಎಂದು ಪರಿಗಣಿಸಿರುವ ಇಲ್ಲಿನ ೫ನೇ ಹೆಚ್ಚುವರಿ ನ್ಯಾಯಾಲಯ ಪ್ರಕರಣದ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಆರೋಪಿ ಜಯೇಶ್ ನನ್ನು ಅಪರಾಧಿ ಎಂದು ಪರಿಗಣಿಸಿ ಆತನಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ.

ಶಿರಾಡಿ ಗ್ರಾಮದ ಸಿರಿಬಾಗಿಲು ಪೊಲ್ಯೋಟ್ಟು ಎಂಬಲ್ಲಿ ೨೦೦೮ರ ಆಗಸ್ಟ್ ೨ರಂದು ತನ್ನ ದೊಡ್ಡಪ್ಪನ ಮಗ ಲೋಹಿತ್ ಯಾನೆ ಲವರವರ ಪತ್ನಿ ಸೌಮ್ಯ ಮತ್ತು ಆಕೆಯ ೩ ವರ್ಷದ ಗಂಡು ಮಗು ಜಿಷ್ಣು ಎಂಬವರನ್ನು ಕೊಲೆಗೈದಿರುವ ಆರೋಪಿ ಜಯೇಶ್ ಯಾನೆ ಜಯೇಶ್ ಕಾಂತ್ ಅಲಿಯಾಸ್ ಶಾಹಿರ್ ಅಲಿಯಾಸ್ ಅಪರಾಧಿ ಎಂದು ನ್ಯಾಯಾಲಯ ತೀರ್ಮಾನಿಸಿ ಮರಣದಂಡನೆಯ ತೀರ್ಪು ನೀಡಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here