ಮಂಗಳೂರು: ಮಹಾದಾಯಿ ಯೋಜನೆ ವಿಚಾರವನ್ನು ಬಗೆಹರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾತಾನಾಡಿದ ಅವರು ಪ್ರಧಾನಿ ಮೋದಿ ಅವರು ಮೂರು ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಸಮಸ್ಯೆ ಪರಿಹಾರ ಮಾಡಬೇಕು.
ಪ್ರಧಾನಿಯವರಿಗೆ ಇದು ಇಂದು ನಿಮಿಷದ ಕೆಲಸ.ಆದರೆ, ಅವರು ಯಾಕೆ ಮಾಡುತ್ತಿಲ್ಲ ಅನ್ನೋದು ಮಾತ್ರ ಗೊತ್ತಾಗುತ್ತಿಲ್ಲ. ಯೋಜನೆ ಬಗೆಹರಿಸಲು ಒತ್ತಾಯಿಸಿ ರಾಜ್ಯದ ಎಲ್ಲ್ಲಾ ಸಂಸದರು ರಾಜಿನಾಮೆ ನೀಡಲಿ ಎಂದು ಹೇಳಿದ್ದಾರೆ.