ಮಂಗಳೂರು: ಶಿಕ್ಷಣದಿಂದ ಅರ್ಥಿಕವಾಗಿ ಸಶಕ್ತರಾಗಲು ಸಾಧ್ಯವಾಗುತ್ತದೆ. ಆದುರಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಆ ನಿಟ್ಟಿನಲ್ಲಿ ಶ್ರಮಿಸುವುದು ಅವಶ್ಯ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಹೇಳಿದರು.ದುಬೈ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಲೊಯೊಲಾ ಸಭಾಂಗಣದಲ್ಲಿ ರವಿವಾರ ಆಯೋಜಿಸಿದ್ದ ವಿದ್ಯಾರ್ಥಿವೇತನ,
ಗಾಲಿಕುರ್ಚಿ, ಹೊಲಿಗೆ ಯಂತ್ರ ಮುಂತಾದ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.ಆರ್ಥಿಕವಾಗಿ ಅಶಕ್ತರಾದ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ನೆರವು ನೀಡಿದಾಗ ಅವರು ಜೀವನದಲ್ಲಿ ಉನ್ನತಿ ಸಾಧಿಸಲು ಸಾಧ್ಯವಾಗುತ್ತದೆ. ದುಬೈ ಬ್ಯಾರೀಸ್ ಕಲ್ಚರಲ್ ಫೋರಂ ಈ ಕಾರ್ಯವನ್ನು ಹಲವಾರು ವರ್ಷಗಳಿಂದ ಮಾಡುತ್ತಾ ಬರುತ್ತಿದೆ ಎಂದವರು ಶ್ಲಾಘಿಸಿದರು.