Thursday 28th, March 2024
canara news

ಆ. 21:ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್‌ ಶಾ ಮಂಗಳೂರಿಗೆ

Published On : 19 Aug 2016   |  Reported By : Canaranews Network   |  Pic On: photo credit: The Hindu


ಮಂಗಳೂರು: ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್‌ ಶಾ ಆ. 21ರಂದು ಮಂಗಳೂರಿಗೆ ಆಗಮಿಸಲಿದ್ದು, ಉಳ್ಳಾಲದಲ್ಲಿ ಜರಗಲಿರುವ 70ನೇ ಸ್ವಾತಂತ್ರ್ಯಸಂಭ್ರಮ ಹಾಗೂ ಬಲಿದಾನ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಅಮಿತ್‌ ಶಾ ಆ. 21ರಂದು ಉಳ್ಳಾಲಕ್ಕೆ ಭೇಟಿ ನೀಡಿ ಬಲಿದಾನ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಗೋವಾದಿಂದ ಅವರು ಬೆಳಗ್ಗೆ 4.30ಕ್ಕೆ ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣಕ್ಕೆ ಆಗಮಿಸುವರು.

ಬೆಳಗ್ಗೆ 10 ಗಂಟೆಗೆ ನಗರದ ಬಿಜೆಪಿ ಕಚೇರಿಗೆ ಆಗಮಿಸಿ "ಗಿಡ ನೆಡಿ ಪರಿಸರ ಉಳಿಸಿ' ಕಾರ್ಯಕ್ರಮದ ಅನ್ವಯ ಗಿಡ ನೆಡಲಿದ್ದಾರೆ. 10.20ಕ್ಕೆ ಪಂಪ್‌ವೆಲ್‌ ವೃತ್ತದಲ್ಲಿ ತಿರಂಗಾ ಯಾತ್ರೆಯ ಬೃಹತ್‌ ವಾಹನ ರ್ಯಾಲಿ ಉದ್ಘಾಟಿಸುವರು, 11 ಗಂಟೆಗೆ ಉಳ್ಳಾಲದಲ್ಲಿ ರಾಣಿ ಅಬ್ಬಕ್ಕನ ಪ್ರತಿಮೆಗೆ ಹಾರಾರ್ಪಣೆ ಮುಖಾಂತರ ಬಲಿದಾನ ಸ್ಮರಣೆ ಕಾರ್ಯಕ್ರಮ ನೆರವೇರಿಸುವರು. 11.30ಕ್ಕೆ ಕೊಣಾಜೆಯ ಮಂಗಳ ಗಂಗೋತ್ರಿ ಆವರಣದೊಳಗೆ ತಿರಂಗಾ ಯಾತ್ರೆಯ ಬೃಹತ್‌ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here