ಮಂಗಳೂರು: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ತಂಡವೊಂದು ರೌಡಿ ಶೀಟರ್ ನೊಬ್ಬನ್ನನು ಕೊಲೆಗೈದ ಘಟನೆ ಮಂಗಳೂರು ಹೊರವಲಯದ ವಾಮಂಜೂರು ಬಳಿ ನಡೆದಿದೆ.ಚರಣ್ ಕೊಲೆಗೀಡದಾತ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಕೊಲೆಗೆ ಸಂಬಂಧಿಸಿ ಮೂಡುಶೆಡ್ಡೆಯ ರಿಜ್ಜು ಯಾನೆ ರಿಝ್ವಾನ್, ವಾಮಂಜೂರಿನ ರಾಯಿಫ್, ಶಾರುಖ್, ಮುಸ್ತಾಪ, ಗುರುಪುರದ ನವಾಝ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯ ಬಳಿಕ ಪರಾರಿಯಾಗಿದ್ದ ಆರೋಪಿಗಳನ್ನು ಕೆಲವೇ ತಾಸಿನಲ್ಲಿ ಪೊಲೀಸರು ಬಿ.ಸಿ. ರೋಡಿನ ಟೋಲ್ಗೇಟ್ ಬಳಿ ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.
ಕೊಲೆ ನಡೆದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದು, ಆರೋಪಿಗಳು ಸಂಚರಿಸುತ್ತಿದ್ದ ಬೊಲೆರೋ ಕಾರನ್ನು ಟೋಲ್ ಗೇಟ್ ಬಳಿ ತಡೆದು ನಿಲ್ಲಿಸಿ ಐವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ