Friday 26th, April 2024
canara news

ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ಸಮಾಜ ಜಾಗೃತವಾಗಲಿ: ಸಚಿವ ರೈ

Published On : 25 Aug 2016   |  Reported By : Canaranews Network


ಮಂಗಳೂರು: ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ಎಸಗುವ ಮತೀಯ ಶಕ್ತಿಗಳ ವಿರುದ್ಧ ಪ್ರಜ್ಞಾವಂತರು ಜಾಗೃತರಾಗಬೇಕು ಹಾಗೂ ಅವರನ್ನು ದೂರವಿಡಬೇಕು ಎಂದು ರಾಜ್ಯ ಅರಣ್ಯ, ಪರಿಸರ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು.ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಉಭಯ ಜಿಲ್ಲೆಗಳಲ್ಲಿ, ಧರ್ಮ, ದೇವರು, ದೇಶಪ್ರೇಮ, ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರ ನೋವು ತರುವ ವಿಚಾರ. ಕೆಂಜೂರಿನಲ್ಲಿ ನಡೆದಿರುವ ಪ್ರವೀಣ್ ಪೂಜಾರಿ ಹತ್ಯೆ ಗೋರಕ್ಷಕರ ಮಾನಸಿಕ ಸ್ಥಿತಿ ತೆರೆದಿಟ್ಟಿದೆ. ಗೋರಕ್ಷಣೆ ಹೆಸರಿನಲ್ಲಿ ಹತ್ಯೆ ನಡೆಯುತ್ತಿದೆ ಎಂದರು.

ಗೋರಕ್ಷಣೆ ಹೆಸರಿನಲ್ಲಿ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿಯವರ ಮೇಲೆ ಹಲ್ಲೆ ಮಾಡುತ್ತಿದ್ದ ಶಕ್ತಿಗಳು ಇದೀಗ ಹಿಂದುಳಿದ ವರ್ಗಗಳ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿವೆ. ಸಮಾಜದಲ್ಲಿ ಸಾಮರಸ್ಯ ಕದಡುವ ಮತೀಯ ಶಕ್ತಿಗಳ ಇಂತಹ ಕೃತ್ಯಗಳನ್ನು ಪ್ರಜ್ಞಾವಂತ ನಾಗರಿಕರು ವಿರೋಧಿಸಬೇಕು ಎಂದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here