ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ,ಮಾಜಿ ಸಂಸದೆ ರಮ್ಯಾ ಅವರಿಗೆ ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿ, ಕಾರಿನತ್ತ ಮೊಟ್ಟೆ ಎಸೆದ ಘಟನೆ ನಡೆದಿದೆ. ಪಾಕ್ ಪರ ಹೇಳಿಕೆ ನೀಡಿ ವಿವಾದವಾದ ಬಳಿಕ ಮಂಗಳೂರು ನರಕ ಎಂದು ಇನ್ನೊಂದು ವಿವಾದ ಹುಟ್ಟು ಹಾಕಿದ್ದ ರಮ್ಯಾ ವಿರುದ್ಧ ನೂರಾರು ಬಿಜೆಪಿ, ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.
ಮಾರ್ಗದುದ್ದಕ್ಕೂ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಪ್ಪು ಬಾವುಟ ಪ್ರದರ್ಶಿಸಿ ಘೇರಾವ್ ಹಾಕಿದರು. ಪ್ರತಿಭಟನೆ ನಡೆಸುತ್ತಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದ ಬಗ್ಗೆ ವರದಿಯಾಗಿದೆ.