ಮಂಗಳೂರು : ಗಣೇಶ ಹಬ್ಬ ಸಂಭ್ರಮದಿಂದ ಶಾಂತಿಯುತವಾಗಿ ಆಚರಣೆಯಾಗಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನೀಡುವ ಸೂಚನೆಗಳನ್ನು ಸಂಘಟಕರು ಪಾಲಿಸಿ ಸಹಕರಿಸಬೇಕು ಎದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ ಬೊರಸೆ ಹೇಳಿದ್ದಾರೆ.
ಮುಂಬರುವ ಗಣೇಶ ಚೌತಿ ಹಬ್ಬದ ಹಿನ್ನೆಲೆಯಲ್ಲಿ ಗಣೇಶೋತ್ಸವ ಸಮಿತಿಗಳ ಮುಖ್ಯಸ್ಥರ ಸಭೆಯನ್ನುದ್ದೇಶಿ ಮಾತನಾಡಿದ ಅವರು, ಹಬ್ಬದ ಪೆಂಡಾಲ್ ಗಳನ್ನು ಅನಾಹುತಗಳು ನಡೆಯದಂತೆ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ವಹಿಸಬೇಕು. ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು. ಶಾರ್ಟ್ ಸರ್ಕ್ಯೂಟ್ ಆಗದಂತೆ ನಿಗಾ ವಹಿಸಬೇಕು ಎಂದು ಅವರು ಎಚ್ಚರಿಕೆ ಸಲಹೆ ನೀಡಿದರು.