Friday 19th, April 2024
canara news

ಮನೆ ಕಳ್ಳತನ; ೨.೭೫ ಲಕ್ಷ ರೂ. ಕಳವು

Published On : 28 Aug 2016   |  Reported By : Canaranews Network


ಮಂಗಳೂರು: ಮನೆಗೆ ನುಗ್ಗಿರುವ ಕಳ್ಳರು ೨.೭೫ ಲಕ್ಷ ನಗದು ಕಳವುಗೈದಿರುವ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಠಾಣಾ ವ್ಯಾಪ್ತಿಯ ದೇರಳಕಟ್ಟೆ ಸಮೀಪ ಸಂಭವಿಸಿದೆ.ನಾಟೆಕಲ್ ಸಮೀಪ ಇರುವ ಖಲೀಲ್ ಚಿಕನ್ ಸ್ಟಾಲ್ ಮಾಲಿಕ ಅಬ್ದುಲ್ ಕರೀಮ್ ಎಂಬವರ ಮನೆಯಲ್ಲಿ ಕಳವು ನಡೆದಿದೆ.

ಶುಕ್ರವಾರ ತಡರಾತ್ರಿ ವೇಳೆ ಮನೆಯ ಹಿಂಬಾಗಿಲ ಚಿಲಕವನ್ನು ಕಿಟಕಿ ಮೂಲಕ ತೆರೆದು ಒಳನುಗ್ಗಿರುವ ಕಳ್ಳರು ಮನೆಯ ಎಲ್ಲಾ ಕೋಣೆಗಳಲ್ಲಿ ಜಾಲಾಡಿ ನಂತರ ಮನೆ ಛಾವಣಿಯಲ್ಲಿದ್ದ ಡ್ರಾವರ ನ್ ಕೀ ತೆಗೆದ ಕಳ್ಳರು ಅದರಲ್ಲಿದ್ದ ೨.೭೫ ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ಕೊಣಾಜೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here