Friday 26th, April 2024
canara news

ಬಿಲ್ಲವರ ಭವನದಲ್ಲಿ ವಾರ್ಷಿಕ ಏಕಾಹ ಭಜನಾ ಕಾರ್ಯಕ್ರಮಕ್ಕೆ ಚಾಲನೆ

Published On : 28 Aug 2016   |  Reported By : Rons Bantwal


ಮುಂಬಯಿ, ಆ.27: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿಯು ವಾರ್ಷಿಕವಾಗಿ ಆಚರಿಸುವ ನಿರಂತರ 24 ತಾಸುಗಳ ಭಜನಾ ಕಾರ್ಯಕ್ರಮಕ್ಕೆ ಇಂದಿಲ್ಲಿ ಶನಿವಾರ ಮುಂಜಾನೆ ಸಾಂತಕ್ರೂಜ್ ಪೂರ್ವದ ಅಸೋಸಿಯೇಶನ್ ಭವನದಲ್ಲಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಸನ್ನಿಧಿಯಲ್ಲಿ ಚಾಲನೆಯನ್ನೀಡಲಾಯಿತು.

ಮುಂಜಾನೆ ಸುರ್ಯೋದಯದ 6.04ರ ವೇಳೆಗೆ ಏಕಾಹ ಭಜನಾ ಕಾರ್ಯಕ್ರಮಕ್ಕೆ ಸಮಾಜ ಸೇವಕ ದೀಪ ಪ್ರಜ್ವಲಿಸಿ ಚಾಲನೆಯನ್ನೀಡಿದರು. ಶ್ರೀ ಧನಂಜಯ ಶಾಂತಿ ಉಳ್ಳೂರು ಮತ್ತು ಸುಭಾಶ್ ಮಾಬಿಯಾನ್ ಪೂಜೆ ನೆರವೇರಿಸಿ ಪ್ರಸಾದ ವಿತರಿಸಿದರು. ಅಸೋಸಿಯೇಶನ್‍ನ ಸ್ಥಳೀಯ ಕಚೇರಿಗಳು ಮತ್ತು ಸಮನ್ವಯ ಸಮಿತಿಗಳೂ ಸೇರಿದಂತೆ ಮುಂಬಯಿ ಮಹಾನಗರದಲ್ಲಿನ ವಿವಿಧ ಭಜನಾ ಮಂಡಳಿಗಳು ಭಜನೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಅಸೋಸಿಯೇಶನ್‍ನ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್, ಗೌ| ಪ್ರ| ಕಾರ್ಯದರ್ಶಿ ಧರ್ಮಪಾಲ್ ಜಿ.ಅಂಚನ್, ಧಾರ್ಮಿಕ ಉಪ ಸಮಿತಿ ಕಾರ್ಯಾಧ್ಯಕ್ಷ ಮೋಹನದಾಸ್ ಜಿ.ಪೂಜಾರಿ, ಗೌರವ ಕಾರ್ಯದರ್ಶಿ ರವೀಂದ್ರ ಎ.ಅಮೀನ್, ಇತರೇ ಪದಾಧಿಕಾರಿಗಳು ಸೇರಿದಂತೆ ಅಸೋಸಿಯೇಶನ್‍ನ ಸ್ಥಳೀಯ ಮತ್ತು ಸಮನ್ವಯ ಸಮಿತಿಗಳ ಕಾರ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಆದಿತ್ಯವಾರ ಮುಂಜಾನೆ ಬೆಳಗುಕಾಲಕ್ಕೆ ಮಂಗಳೋತ್ಸವದೊಂದಿಗೆ ಏಕಾಹ ಭಜನಾ ಸಮಾಪ್ತಿ ಕಾಣಲಿದೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here