Thursday 25th, April 2024
canara news

“ತುಳುನಾಡು ತಿರ್ಗಾಟ” ರಥಯಾತ್ರೆ ಪ್ರಾರಂಭ

Published On : 28 Aug 2016   |  Reported By : Rons Bantwal


ಡಿಸೆಂಬರ್ 9ರಿಂದ 13 ರ ವರೆಗೆ ಬದಿಯಡ್ಕದಲ್ಲಿ ಜರಗಲಿರುವ ವಿಶ್ವ ತುಳುವೆರೆ ಆಯನೊದ ಪೂರ್ವಭಾವಿಯಾಗಿ ಬಸ್ರೂರು ತುಳುವೇಶ್ವರದಿಂದ ಕಾಸರಗೋಡು ತುಳುವನದವರೆಗೆ ನಡೆಯುವ ತುಳುನಾಡು ತಿರ್ಗಾಟ ರಥಯಾತ್ರೆಗೆ  (28-08-2016) ಬೆಳಿಗ್ಗೆ 10 ಗಂಟೆಗೆ ಬಸ್ರೂರು ತುಳುವೇಶ್ವರದಿಂದ ಚಾಲನೆ ದೊರಕಲಿದೆ.

ತುಳುನಾಡಿನಾದ್ಯಂತ ಮೂರು ತಿಂಗಳುಗಳ ಕಾಲ ಸಂಚರಿಸಿ ನಾಡಿನೆಲ್ಲರನ್ನು ವಿಶ್ವ ತುಳುವೆರೆ ಆಯನಕ್ಕೆ ಆಮಂತ್ರಿಸುವುದರ ಜೊತೆಗೆ ತುಳುನಾಡಿನ ಜಾನಪದ ಕಲಾ ಪ್ರಕಾರಗಳ ಪ್ರದರ್ಶನದೊಂದಿಗೆ ನಡೆಯುವ ರಥಯಾತ್ರೆಯಲ್ಲಿ ಪ್ರತಿ ಊರಿನಲ್ಲೂ ಜಾನಪದ ಕಲೆ, ಸಂಸ್ಕøತಿ, ಸಾಹಿತ್ಯ, ಸಮಾಜಸೇವೆ ಮೊದಲಾದ ವಿಶೇಷ ಸೇವೆಗೈದ ಮಹನೀಯರನ್ನು ಅಭಿನಂದಿಸುವ ಕಾರ್ಯವೂ ನಡೆಯಲಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಬಸ್ರೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಸ್ರೂರು ಮಹಲಿಂಗೇಶ್ವರ ಕ್ಷೇತ್ರದ ಧರ್ಮದರ್ಶಿ ಸಾಮಾಜಿಕ ಮುಂದಾಳು ಅಪ್ಪಣ್ಣ ಹೆಗ್ಡೆ ರಥಯಾತ್ರೆಗೆ ಚಾಲನೆ ನೀಡಲಿರುವರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರುವರು ಎಂದು ಸಂಬಂದಪಟ್ಟವರು ತಿಳಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here