Friday 19th, April 2024
canara news

ಅನಧಿಕೃತ ಅಂಗಡಿಗಳಿಗೆ ಮನಪಾ ಬೀಗ

Published On : 30 Aug 2016   |  Reported By : Canaranews Network


ಮಂಗಳೂರು: ಪರವಾನಿಗೆ ರಹಿತ ಹಾಗೂ ಪರವಾನಿಗೆ ನವೀಕರಿಸದ ವಾಣಿಜ್ಯ ಮಳಿಗೆಗಳ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಶನಿವಾರ ಕಾರ್ಯಾಚರಣೆ ನಡೆಯಿತು.ಮಂಗಳೂರು ಕೇಂದ್ರ ಮಾರುಕಟ್ಟೆ ಸಮೀಪ ವಾಣಿಜ್ಯ ಸಂಕೀರ್ಣವೊಂದಕ್ಕೆ ಮಹಾನಗರ ಪಾಲಿಕೆ ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷೆ ಕವಿತಾ ಸನಿಲ್ ಹಾಗೂ ಕಂದಾಯ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೆಳಗ್ಗೆ ದಾಳಿ ಕಾರ್ಯಾ ಚರಣೆ ನಡೆಯಿತು.

ಈ ಮಳಿಗೆಗಳಿಗೆ ನೋಟಿಸ್ ನೀಡಿ ಕಾಲಾವಕಾಶ ನೀಡಲಾಗಿತ್ತು. ಆದರೂ ಅವರಿಂದ ಪೂರಕ ಸ್ಪಂದನೆ ಲಭಿಸದ ಕಾರಣ ಶನಿವಾರ ಕಾರ್ಯಾಚರಣೆ ನಡೆಸಲಾಗಿದೆ. ಪರವಾನಿಗೆ ರಹಿತ ಹಾಗೂ ನವೀಕರಿಸದ ವಾಣಿಜ್ಯ ಮಳಿಗೆಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದವರು ತಿಳಿಸಿದರು.ಇದೇ ಪರಿಸರದಲ್ಲಿ ಶುಚಿತ್ವ ಕಾಯ್ದು ಕೊಳ್ಳುವಲ್ಲಿ ತೀವ್ರ ಲೋಪವೆಸಗಿರುವ ಹೊಟೇಲೊಂದರ ವಿರುದ್ಧವೂ ಈ ಸಂದರ್ಭದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದವರು ವಿವರಿಸಿದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here