ಮಂಗಳೂರು: ಪರವಾನಿಗೆ ರಹಿತ ಹಾಗೂ ಪರವಾನಿಗೆ ನವೀಕರಿಸದ ವಾಣಿಜ್ಯ ಮಳಿಗೆಗಳ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಶನಿವಾರ ಕಾರ್ಯಾಚರಣೆ ನಡೆಯಿತು.ಮಂಗಳೂರು ಕೇಂದ್ರ ಮಾರುಕಟ್ಟೆ ಸಮೀಪ ವಾಣಿಜ್ಯ ಸಂಕೀರ್ಣವೊಂದಕ್ಕೆ ಮಹಾನಗರ ಪಾಲಿಕೆ ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷೆ ಕವಿತಾ ಸನಿಲ್ ಹಾಗೂ ಕಂದಾಯ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೆಳಗ್ಗೆ ದಾಳಿ ಕಾರ್ಯಾ ಚರಣೆ ನಡೆಯಿತು.
ಈ ಮಳಿಗೆಗಳಿಗೆ ನೋಟಿಸ್ ನೀಡಿ ಕಾಲಾವಕಾಶ ನೀಡಲಾಗಿತ್ತು. ಆದರೂ ಅವರಿಂದ ಪೂರಕ ಸ್ಪಂದನೆ ಲಭಿಸದ ಕಾರಣ ಶನಿವಾರ ಕಾರ್ಯಾಚರಣೆ ನಡೆಸಲಾಗಿದೆ. ಪರವಾನಿಗೆ ರಹಿತ ಹಾಗೂ ನವೀಕರಿಸದ ವಾಣಿಜ್ಯ ಮಳಿಗೆಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದವರು ತಿಳಿಸಿದರು.ಇದೇ ಪರಿಸರದಲ್ಲಿ ಶುಚಿತ್ವ ಕಾಯ್ದು ಕೊಳ್ಳುವಲ್ಲಿ ತೀವ್ರ ಲೋಪವೆಸಗಿರುವ ಹೊಟೇಲೊಂದರ ವಿರುದ್ಧವೂ ಈ ಸಂದರ್ಭದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದವರು ವಿವರಿಸಿದರು.