Friday 19th, April 2024
canara news

ಇಂದು ವಾಸುದೇವ ಮಾರ್ನಾಡ್ ಅವರಿಗೆ `ಯಕ್ಷಗಾನ ಕಲಾ ಪ್ರಶಸ್ತಿ 2016' ಪ್ರದಾನ

Published On : 03 Sep 2016   |  Reported By : Rons Bantwal


ಮುಂಬಯಿ, ಸೆ.03: ರಾಷ್ಟ್ರೀಯ ಬಿಲ್ಲವರ ಮಹಾಮಂಡಲ, ಮೂಲ್ಕಿ ಇದರ ಅಧ್ಯಕ್ಷರೂ ಹಾಗೂ ಭಾರತ್ ಬ್ಯಾಂಕ್‍ನ ಕಾರ್ಯಾಧ್ಯಕ್ಷರೂ ಆದ ಶ್ರೀಯುತ ಜಯ ಸಿ. ಸುವರ್ಣರ ಮಾತೃಶ್ರೀ ದಿ| ಅಚ್ಚು ಚಂದು ಸುವರ್ಣರ ಸ್ಮರಣಾರ್ಥ ಸ್ಥಾಪಿತ ಶಾಶ್ವತ ನಿಧಿಯಿಂದ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಕೊಡಮಾಡುವ `ಯಕ್ಷಗಾನ ಕಲಾ ಪ್ರಶಸ್ತಿ 2016' ಇಂದು ಹೆಸರಾಂತ ಯಕ್ಷಗಾನ ಕಲಾವಿದ, ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ವಾಸುದೇವ ಶೆಟ್ಟಿ ಮಾರ್ನಾಡ್ ಅವರಿಗೆ ಪ್ರದಾನಿಸಲಾಗುವುದು ಎಂದು ಅಸೋಸಿಯೇಶನ್ ಪದಾಧಿಕಾರಿಗಳು ತಿಳಿಸಿದ್ದಾರೆ.

ಮೂಡಬಿದಿರೆ ಸಮೀಪದ ಮಾರ್ನಾಡ್ ಗ್ರಾಮದಲ್ಲಿ ದಿ| ಪೆÇನ್ನಪ್ಪ ಶೆಟ್ಟಿ ಹಾಗೂ ಸರಸ್ವತಿ ಶೆಟ್ಟಿ ದಂಪತಿಗಳಿಗೆ ಜನಿಸಿರುವ ವಾಸುದೇವ ಶೆಟ್ಟಿ ಮಾರ್ನಾಡು ಅವರು ಯಕ್ಷಗಾನ ಕ್ಷೇತ್ರಕ್ಕೆ ಸಲ್ಲಿಸಿರುವ ಮೂರುವರೆ ದಶಕಗಳ ಸೇವೆಯನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗುವುದು. ಯಕ್ಷಗಾನ ಪ್ರಶಸ್ತಿ ಪ್ರದಾನ ಸಮಾರಂಭವು ಇಂಸು ಸೆ.03 ಶನಿವಾರ ಸಂಜೆ 4.00 ಗಂಟೆಗೆ ಸಾಂತಕ್ರೂಜ್ ಪೂರ್ವದ ಬಿಲ್ಲವ ಭವನದಲ್ಲಿ ಜರಗಲಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here