Saturday 20th, April 2024
canara news

ಅನುಪಮಾ ಶೆಣೈ ರಾಜೀನಾಮೆ ಹಿಂಪಡೆಯಲು ಸಿಎಂಗೆ ಪತ್ರ

Published On : 18 Sep 2016   |  Reported By : Canaranews Network


ಮಂಗಳೂರು: ಕೂಡ್ಲಿಗಿ ಡಿವೈಎಸ್‌ಪಿ ಹುದ್ದೆಗೆ ನೀಡಿದ ರಾಜೀನಾಮೆ ಹಿಂಪಡೆಯುವುದಾಗಿ ಕೋರಿ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ. ಆ. 29ಕ್ಕೆ ಪತ್ರ ಬರೆಯಲಾಗಿದ್ದರೂ ಪರಿಶೀಲಿಸಲಾಗುತ್ತಿದೆ ಎಂದಷ್ಟೇ ಉತ್ತರ ಬಂದಿದೆ ಎಂದು ಕೂಡ್ಲಿಗಿ ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ತಿಳಿಸಿದ್ದಾರೆ.

ಯುವ ಬ್ರಿಗೇಡ್‌ ದ.ಕ. ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಟಿ.ವಿ. ರಮಣ ಪೈ ಕನ್ವೆನ್ಶನ್‌ ಸೆಂಟರ್‌ನಲ್ಲಿ ನಡೆದ "ಹೈದರಾಬಾದ್‌ ಸ್ವಾತಂತ್ರ್ಯ ಸಂಘರ್ಷ: ಹೈದರಾಬಾದ್‌ ಮುಕ್ತಿ ದಿವಸ್‌' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ರಾಜೀನಾಮೆ ಹಿಂಪಡೆಯುವ ಕುರಿತು ಪತ್ರ ಬರೆದ ಅನಂತರ ಮುಖ್ಯಮಂತ್ರಿಯವರೇ ತನಗೆ ಖುದ್ದಾಗಿ ಕರೆ ಮಾಡಿದ್ದರು.

"ಒಮ್ಮೆ ರಾಜೀನಾಮೆ ಕೊಡುವುದು; ಇನ್ನೊಮ್ಮೆ ಹಿಂಪಡೆಯುವುದು ಯಾಕೆ ಹೀಗೆ' ಎಂದು ಪ್ರಶ್ನಿಸಿದ್ದರು. ಅವರಿಗೂ ಪರಿಸ್ಥಿತಿ ಮತ್ತು ಆಗಿನ ಮನಸ್ಥಿತಿ ಬಗ್ಗೆ ವಿವರಿಸಿದ್ದೆ. ಪತ್ರ ಪರಿಶೀಲನೆಯಲ್ಲಿದೆ ಎಂದಷ್ಟೇ ತಿಳಿಸಿದ್ದಾರೆ ಎಂದು ಅವರು ತಿಳಿಸಿದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here