ಮಂಗಳೂರು: ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಸೀಟು ಕೊಡಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ತಮಿಳುನಾಡು ಮೂಲದ ಸಂಜಯ್ ಕುಮಾರ್ ಹಾಗೂ ಮಡಿಕೇರಿಯ ತಿಮ್ಮಯ್ಯ ಬಂಧಿತ ಆರೋಪಿಗಳು. ಇವರು ತಮಿಳುನಾಡು ಮೂಲದ ೧೬ ಮಂದಿ ವಿದ್ಯಾರ್ಥಿ ಪೋಷಕರಿಂದ ಲಕ್ಷಾಂತರ ರೂಪಾಯಿ ಪಡೆದು ತಲೆ ಮರೆಸಿಕೊಂಡಿರುವ ಆರೋಪ ಎದುರಿಸುತ್ತಿದ್ದಾರೆ. ಆರೋಪಿಗಳ ವಂಚನೆಯಿಂದ ಗಾಬರಿಗೊಳಗಾದ ಪೋಷಕರು ಪೊಲೀಸರ ಮೊರೆ ಹೋಗಿದ್ದರು .
ತಕ್ಷಣ ಕಾರ್ಯಪ್ರವೃತ್ತರಾದ ಮಂಗಳೂರಿನ ಉಳ್ಳಾಲ ಠಾಣಾ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸ್ ಕಮಿಷನರ್ ಎಂ. ಚಂದ್ರಶೇಖರ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಬಂಧಿತ ಆರೋಪಿಗಳಿಂದ ೩೭.೫೦ ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ.