ಮಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ನಡೆಸಿದ ಸಿಐಡಿ ತಂಡವು ಮುಖ್ಯಮಂತ್ರಿ ಹೇಳಿದಂತೆ ಮಾಡಿ ಮುಗಿಸಿದ್ದಾರೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಗಣಪತಿ ಸಾವಿನ ತನಿಖೆಗೆ ಸಾಕಷ್ಟು ಸಾಕ್ಷ್ಯಾಧಾರಗಳು ಇದ್ದರೂ ಸಿಐಡಿ ಸಮರ್ಪಕ ತನಿಖೆ ನಡೆಸಿಲ್ಲ . ಎಲ್ಲವೂ ಸಿಎಂ ಅಣತಿಯಂತೆ ನಡೆದಿದೆ.ಆದ್ದರಿಂದಲೆ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ ಎಂದರು. ಇನ್ನೆರಡು ವರ್ಷಗಳಲ್ಲಿ ಚುನಾವಣೆ ಎದುರಾಗುತ್ತಿದ್ದು ಇದೇ ರೀತಿಯ ಉದ್ದಟತನ ಮೆರೆದರೆ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಮುಗಿಸಿದ ಆರೋಪ ನಿಮ್ಮ ಮೇಲೆ ಬರಲಿದೆ ಎಂದು ಪೂಜಾರಿ ಸಿದ್ದರಾಮಯ್ಯನವರನ್ನು ಎಚ್ಚರಿಸಿದ್ದಾರೆ.