ಮಂಗಳೂರು: ಒಂದೇ ಜಾತಿ,ಒಂದೇ ಮತ, ಒಂದೇ ದೇವರು ಎಂಬ ಸಂದೇಶ ಸಾರಿದ; ಹಿಂದುಳಿದ, ಶೋಷಿತ ವರ್ಗದ ಜನರಿಗೆ ಸ್ವಾವ ಲಂಬಿ, ಸ್ವಾಭಿಮಾನದ ಬದುಕು ತೋರಿದ ಬ್ರಹ್ಮಶ್ರೀ ನಾರಾಯಣ ಗುರು ಸರ್ವ ಮಾನ್ಯರು ಎಂದು ಸಚಿವ ಬಿ. ರಮಾನಾಥ ರೈ ಹೇಳಿದರು.ದ.ಕ. ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಹಾಗೂ ಜಿಲ್ಲೆಯ ಎಲ್ಲ ಬ್ರಹ್ಮಶ್ರೀ ನಾರಾಯಣ ಗುರು ಸಂಘಟನೆಗಳ ಸಹಕಾರದೊಂದಿಗೆ ಸೆ. 16ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 162ನೇ ಜನ್ಮದಿನಾಚರಣೆಯನ್ನು ಅವರು ಉದ್ಘಾಟಿಸಿದರು.
ಸರಕಾರದಿಂದ ಹಲವು ಕಾರ್ಯಕ್ರಮ ಸಾಮಾಜಿಕ ಪರಿವರ್ತನೆಯಲ್ಲಿ ಶ್ರೀ ನಾರಾಯಣ ಗುರು ಸಂದೇಶ ಪ್ರಮುಖ ಪಾತ್ರ ವಹಿಸಿದೆ. ಶಿಕ್ಷಣ ಮತ್ತು ಹಿಂದುಳಿದ, ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ಒದಗಿಸುವ ಶ್ರೀಗುರು ಸಂದೇಶದ ಸಾಕಾರಕ್ಕೆ ಪೂರಕ ವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ ಎಂದು ಅವರು ಹೇಳಿದರು.