ಮಂಗಳೂರು: ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಸೋಮವಾರ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ.ಎರಡು ದಿನಗಳ ಹಿಂದೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದ್ದ ಕಾರಣ ನರೇಶ್ ಶೆಣೈಜೈಲಿನಿಂದ ಬಿಡುಗಡೆಗೊಂಡಿದ್ದನು..
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ತಿಂಗಳಿನಿಂದ ಜೈಲು ವಾಸ ಅನುಭವಿಸುತ್ತಿದ್ದನು. ಇಂದು ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಜೈಲಿನಿಂದ ಈತ ಬಿಡುಗಡೆಗೊಂಡಿದ್ದಾನೆ. ಮಾರ್ಚ್. ೨೧ರಂದು ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರನ್ನು ಮನೆಯಿಂದ ಅಲ್ಪ ದೂರದಲ್ಲಿ ಹತ್ಯೆಗೈಯಲಾಗಿತ್ತು.