ಮಂಗಳೂರು: ಲಾಭಕ್ಕಿಂತ ಹೆಚ್ಚಾಗಿ ಜನಸೇವೆ ದೃಷ್ಟಿಯಿಂದ ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಕಾರ್ಯ ನಿರ್ವಹಿಸಬೇಕು. ಬಸ್ಗಳ ಬೇಡಿಕೆಯಿರುವ ಗ್ರಾಮೀಣ ಪ್ರದೇಶದಲ್ಲೂ ಬಸ್ಗಳನ್ನು ಓಡಿಸುವುದು ಅಗತ್ಯ. ನಗರ ವ್ಯಾಪ್ತಿಯಲ್ಲಿ ಬಸ್ ಓಡಿಸಲು ಪಡೆಯುವ ಪರವಾನಿಗೆಗಳ ಅನುಪಾತಕ್ಕೆ ಸಮನಾಗಿ ಗ್ರಾಮೀಣ ಪ್ರದೇಶದಲ್ಲೂ ಬಸ್ಗಳನ್ನು ಓಡಿಸುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕಾನೂನು ಪ್ರಕಾರ ಅವಕಾಶ ಇದೆಯೇ ಎಂಬುದನ್ನು ಪರಿಶೀಲಿಸಿ ಸ್ಪಷ್ಟ ನೀತಿ ರೂಪಿಸುವಂತೆ ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಸಲಹೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್ಟಿಎ)ದ ಸಭೆಯಲ್ಲಿ ಸಾರ್ವಜನಿಕರು ಹಾಗೂ ಬಸ್ ಮಾಲಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.