ಮಂಗಳೂರು: ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ನ ತೀರ್ಪಿನಂತೆ ತಮಿಳುನಾಡಿಗೆ ನೀರು ಬಿಡಲು ಕರ್ನಾಟಕಕ್ಕೆ ಸಾಧ್ಯವೇ ಇಲ್ಲದಿರುವಾಗ ಈ ಬಗ್ಗೆ ಮಧ್ಯ ಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕಾದ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದೇಕೆ ಎಂದು ವಿಧಾನ ಪರಿಷತ್ನ ಮುಖ್ಯ ಸಚೇತಕ ಐವನ್ ಡಿ'ಸೋಜಾ ಪ್ರಶ್ನಿಸಿದ್ದಾರೆ.
ಯಾವುದೇ ವಿಚಾರದಲ್ಲಿ ಎರಡು ರಾಜ್ಯಗಳ ಮಧ್ಯೆ ವಿವಾದ ಉದ್ಭವಿಸಿದಾಗ ಮಧ್ಯ ಪ್ರವೇಶಿಸಿ ಬಿಕ್ಕಟ್ಟಿಗೆ ಪರಿಹಾರ ಸೂಚಿಸುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸರಕಾರದ ಮುಖ್ಯಸ್ಥರಾಗಿರುವವರ ಕರ್ತವ್ಯ ಎಂದು ಅವರು ಆದಿತ್ಯವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.