ಮಂಗಳೂರು: ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡ, ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹಾಗೂ ಕಾರ್ಯಾಧ್ಯಕ್ಷ ಎಂ.ಎಸ್. ನಾರಾಯಣ ರಾವ್ ಸೂಚನೆಯಂತೆ ದ.ಕ. ಜಿಲ್ಲಾ ಜೆಡಿಎಸ್ ಅಧ್ಯಕ್ಷರು, 8 ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು ಹಾಗೂ ಬ್ಲಾಕ್ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಹೇಳಿದರು.
ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಬಿ. ಮೊಹಮ್ಮದ್ ಕುಂಞಿ ವಿಟ್ಲ ಅವರನ್ನು ರಾಜ್ಯಾಧ್ಯಕ್ಷರು ನೇಮಕ ಮಾಡಿದ್ದಾರೆ. ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರನ್ನು ಪಕ್ಷದ ಜಿಲ್ಲಾ ಚುನಾವಣಾಧಿಕಾರಿ ಪ್ರವೀಣ್ಚಂದ್ರ ಜೈನ್ ನೇಮಕಗೊಳಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ..