ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಹಾಗೂ ಪ್ರಧಾನ ಅರ್ಚಕ ವಾಸುದೇವ ಆಸ್ರಣ್ಣ ಅವರ ಮನೆಗೆ ಸೋಮವಾರ ರಾತ್ರಿ ದರೋಡೆಕೋರರ ತಂಡ ನುಗ್ಗಿ ಮನೆ ಮಂದಿಯನ್ನು ಬೆದೆರಿಸಿ ಹಲ್ಲೆ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆಗೆ ಸಂಬಂಧಿಸಿ ದರೋಡೆಕೋರರ ಪತ್ತೆ ಕಾರ್ಯ ಮುಂದುವರಿದಿದೆ.
ತನಿಖೆಗಾಗಿ ರಚಿಸಲಾಗಿರುವ ನಾಲ್ವರ ಪೊಲೀಸ್ ತಂಡವು ಹಲವು ಶಂಕಿತ ರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದೆ. ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆ ಹಾಕಿದೆ. ದರೋಡೆಕೋರರು ತುಳು ಮತ್ತು ಅರೆಬರೆ ಹಿಂದಿ ಮಾತನಾಡುವವರಾಗಿದ್ದ ಕಾರಣ ಸ್ಥಳೀಯರೇ ಈ ಕೃತ್ಯದಲ್ಲಿ ಭಾಗಿಯಾಗಿರಬಹುದೇ ಎಂದು ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ.