ಮಂಗಳೂರು: ಅಡಿಕೆಗೆ ಪ್ರತ್ಯೇಕ ಮಂಡಳಿ ಸ್ಥಾಪಿಸುವ ಕುರಿತಂತೆ ಅಧ್ಯಯನ ನಡೆಸಲು ರಾಜ್ಯ ಸರಕಾರ ರಚಿಸಿದ್ದ ತಜ್ಞರ ಸಮಿತಿಯು ತನ್ನ ವಿಶ್ಲೇಷಣಾತ್ಮಕ ವರದಿಯನ್ನು ಸರಕಾರಕ್ಕೆ ಸಲ್ಲಿಸಿದ್ದು, ಅಡಿಕೆ ಮಂಡಳಿ ಸ್ಥಾಪಿಸುವುದು ಸೂಕ್ತ ಎಂಬುದಾಗಿ ಸಮಿತಿ ಶಿಫಾರಸು ಮಾಡಿದೆ ಎಂದು ಮಂಗಳೂರಿನಲ್ಲಿ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಐವನ್ ಡಿ'ಸೋಜಾ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ತಜ್ಞರ ಸಮಿತಿಯ ವರದಿಯನ್ನು ಪರಿಶೀಲಿಸಿ ಮುಂದಿನ ಕ್ರಮ ಜರಗಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ ಎಂದು ಇದೇ ಸಂದರ್ಭ ಅವರು ಹೇಳಿದ್ದಾರೆ.