Tuesday 16th, April 2024
canara news

ಶಿರಾಡಿ ಘಾಟ್ ನಲ್ಲಿ 2ನೇ ಹಂತದ ಕಾಮಗಾರಿ; ಅ. 15ರ ಬಳಿಕ ಸಂಚಾರ ಸ್ಥಗಿತ

Published On : 08 Oct 2016   |  Pic On: photo credit: The Hindu


ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಎರಡನೇ ಹಂತದ ಕಾಂಕ್ರೀಟ್ ಕಾಮಗಾರಿ ಹಿನ್ನೆಲೆಯಲ್ಲಿ ಅ. 15ರ ಬಳಿಕ ಸಂಪೂರ್ಣ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ.ಕಾಮಗಾರಿ ಕುರಿತು ಬೆಂಗಳೂರಿನಲ್ಲಿ ಸಭೆ ನಡೆದಿದ್ದು, ಈ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಳಿಸುವ ಬಗ್ಗೆಯೂ ವಿಷಯ ಪ್ರಸ್ತಾವವಾಗಿತ್ತು. ಸಂಚಾರ ಸ್ಥಗಿತಗೊಂಡರೆ ಎದುರಾಗುವ ಸಾಧಕ, ಬಾಧಕಗಳ ಬಗ್ಗೆಯೂ ಸಭೆಯಲ್ಲಿ ತಿಳಿಸಲಾಗಿತ್ತು.

ಆದರೆ ಸಂಚಾರ ಸ್ಥಗಿತಗೊಳಿಸುವ ಕುರಿತು ಅಂತಿಮ ದಿನಾಂಕ ಇನ್ನೂ ನಿಗದಿಯಾಗದಿರುವುದರಿಂದ ಅ. 15ರ ಅನಂತರವೇ ಸ್ಥಗಿತದ ಬಗ್ಗೆ ನಿರ್ಧಾರವಾಗಲಿದೆ. ಕಾಮಗಾರಿಯನ್ನು ಹೆದ್ದಾರಿ ಬಂದ್ ಮಾಡದೆಯೇ ನಡೆಸುವುದಕ್ಕೆ ಆದ್ಯತೆ ನೀಡಲಾಗುವುದು ಎಂದು ಈ ಹಿಂದೆ ಸಚಿವರು, ಸಂಸದರು ಹಾಗೂ ಅಧಿಕಾರಿಗಳು ತಿಳಿಸಿದ್ದರು. ಆದರೆ, ಹೆದ್ದಾರಿ ಬಂದ್ ಮಾಡುವ ಮೂಲಕವೇ ಕಾಮಗಾರಿ ನಡೆಯಲಿದೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here