ಮಂಗಳೂರು: ಅಕ್ರಮ ಮರಳುಗಾರಿಕೆಯಲ್ಲಿ ಬಡ ಕೂಲಿ ಕಾರ್ಮಿಕರು ಬಲಿಯಾಗುತ್ತಿದ್ದು, ತತ್ಕ್ಷಣ ಅಕ್ರಮ ಮರಳುಗಾರಿಕೆಯನ್ನು ನಿಲ್ಲಿಸಬೇಕು; ಇಲ್ಲವೆಂದರೆ ಕಠಿನ ಕಾನೂನು ಕ್ರಮ ಎದುರಿಸಿ ಎಂದು ಮರಳು ಗುತ್ತಿಗೆದಾರರಿಗೆ ದ.ಕ. ಜಿಲ್ಲಾಧಿಕಾರಿ ಡಾ| ಜಗದೀಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ದ.ಕ. ಜಿಲ್ಲೆಯಲ್ಲಿರುವ ಅಕ್ರಮ ಮರಳುಗಾರಿಕೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ಜಿಲ್ಲಾಡಳಿತ ಬದ್ಧವಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಅವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದವರು ತಿಳಿಸಿದ್ದಾರೆ.