ಮಂಗಳೂರು:ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ನೇತೃತ್ವದಲ್ಲಿ ದೀಪವಳಿ ಹಬ್ಬದ ಪ್ರಯುಕ್ತ ಶನಿವಾರ ಮಂಗಳೂರಿನ ಕದ್ರಿಯ ಗೋ ರಕ್ಷನಾಆಥ ಜ್ಞಾನ ಮಂದಿರದಲ್ಲಿ ಭಾವೈಕ್ಯತಾ ಸಂಗಮ ನಡೆಯಿತು.
ಕಾರ್ಯಕ್ರಮದಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಗೂಡುದೀಪ ಸ್ಪರ್ಧೆಯಲ್ಲಿ ಸುಮಾರು ೭೫ ಗೂಡುದೀಪಗಳು ಪಾಲ್ಗೊಂಡಿದ್ದು, ಜನಾಕರ್ಷಣೆಯ ಕೇಂದ್ರವಾಗಿತ್ತು. ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಭಾವೈಕತಾ ವೈಶಿಷ್ಟತೆ ಎಂಬ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲೆಯ ೧೮ ಮಂದಿ ವಿದ್ಯಾರ್ಥಿಗಳು ಮತ್ತು ಪ್ರಥಮ ಹಾಗೂ ದ್ವೀತೀಯ ಪಿಯುಸಿಯ ೧೪ ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಮಕ್ಕಳಿಗಾಗಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯಲ್ಲಿ ೩೮ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಅಕ್ಕಿ ವಿತರಣೆ ಮತ್ತು ಅಗತ್ಯವಿದ್ದವರಿಗೆ ಕನ್ನಡಕಗಳ ವಿತರಣೆ ನಡೆಯಿತು. ಕದ್ರಿ ಮಠದ ಪ್ರತಿನಿಧಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದೀಪ್ ನಾಥ್ ಜೀ ಮತ್ತು ಪಾಲಕ್ ನಾಥ್ ಜೀ ಅವರು ಎಲ್ಲರಿಗೂ ದೀಪಾವಳಿ ಹಬ್ಬದ ಶುಭ ಕೋರಿದರಲ್ಲದೆ, ಎಲ್ಲರ ಮನಸ್ಸುಗಳು ಬೆಳಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಧರ್ಮಗುರು ಫಾ. ಸೆಬೆಸ್ಟಿಯನ್, ಇಮಾಮ್ ಕೌನ್ಸಿಲ್ ಕಾರ್ಯದರ್ಶಿ ಜಾಫರ್ ಸಾದಿಕ್ ಫೈಝಿ, ಶಾಸಕ ಜೆ.ಆರ್ ಲೋಬೋ, ಉಸ್ತುವಾರಿ ಸಚಿವ ರಮಾನಾಥ ರೈ ಶಾಸಕಿ ಶಕುಂತಲಾ ಶೆಟ್ಟಿ, ಮೇಯರ್ ಹರಿನಾಥ್ ಮೊದಲಾದವರು ಉಪಸ್ಥಿತರಿದ್ದರು.