ಮಂಗಳೂರು: ಮಂಳೂರು ಹೊರವಲಯದ ಕಣ್ಣೂರಿನಿಂದ ಮಂಗಳೂರು ಕಡೆಗೆ ಅಕ್ರಮ ಮರಳು ಹೇರಿಕೊಂಡು ಬರುತ್ತಿದ್ದ ಲಾರಿಗಳನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಪಡೀಲ್ ಜಂಕ್ಷನ್ ನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸ್ ನಿರೀಕ್ಷಕರು ಶನಿವಾರ ಬೆಳಗ್ಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಪಡೀಲ್ ಜಂಕ್ಷನ್ ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದರು.
ಈ ಸಂದರ್ಭದಲ್ಲಿ ಕಣ್ಣೂರು ಕಡೆಯಿಂದ ಮಂಗಳೂರು ಕಡೆಗೆ ಚಲಾಯಿಸಿ ಕೊಂಡು ಬರುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ವಶಕ್ಕೆ ಪಡೆದ ೨ ಟಿಪ್ಪರ್ ಗಳ ಮೌಲ್ಯ ೧೫ ಲಕ್ಷ್ಯ ರೂ. ಮತ್ತು ಮರಳಿನ ಮೌಲ್ಯ ೬ ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.