ಈ ಬಾರಿಯೂ ಟಿಪ್ಪು ಜಯಂತಿಯನ್ನು ಆಚರಿಸಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.ಆದಿತ್ಯವಾರ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರ ಜತೆ ಮಾತನಾಡಿದ ಅವರು, ಟಿಪ್ಪು ಜಯಂತಿಗೆ ಆಚರಣೆಗೆ ಬಜರಂಗದಳ ಸೇರಿದಂತೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದೆ. ಕೋಮುಗಲಭೆ ಎಬ್ಬಿಸುವ ಹುನ್ನಾರದಿಂದ ಹಿಂದೂ ಪರ ಸಂಘಟನೆಗಳು ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದೆ. ಆದರೆ ಟಿಪ್ಪು ಜಯಂತಿಯನ್ನು ಸರ್ಕಾರ ಈ ಬಾರಿಯೂ ಆಚರಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಪ್ರತ್ಯೇಕ ಮರಳು ನೀತಿ
ಕರಾವಳಿಗೆ ಪ್ರತ್ಯೇಕ ಮರಳು ನೀತಿ ರೂಪಿಸಲಾಗುವುದು. ಪ್ರತ್ಯೇಕ ಮರಳು ನೀತಿಯನ್ನು ರೂಪಿಸುವ ಕುರಿತು ನವೆಂಬರ್ ಮೂರರಂದು ಅಧಿಕಾರಿಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಇದೇ ಸಂದರ್ಭ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.