ಕುಂದಾಪುರ, ನ. 2: ಕುಂದಾಪುರ ಸಂತ ಮೇರಿಸ್ ಪಿ.ಯು.ಕಾಲೇಜಿನ ಆಶ್ರಯದಲ್ಲಿ ನಡೆಯುವ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ನೆಡೆಯಿತು. ಮುಖ್ಯ ಅಥಿತಿಯಾಗಿ ಆಗಮಿಸಿದ ಕುಂದಾಪುರ ಎಂಸಿಸಿ ಬ್ಯಾಂಕ್ನ ಶಾಖಾ ಪ್ರಬಂಧಕ ಸಂದೀಪ್ ಹೇಳಿದರು.
“ಕ್ರೀಡಾ ಕೂಟವು ಅತ್ಯಂತ ಯಶಸ್ವಿಯಾಗಿ ಜರುಗಲಿ. ಉತ್ತಮ ಸಂಘಟನೆಯ ಮೂಲಕ ಸಂಸ್ಥೆಯ ಕೀರ್ತಿ ಬೆಳಗಲಿ, ಎಂದು ಕುಂದಾಪುರ ಎಂಸಿಸಿ ಬ್ಯಾಂಕ್ನ ಶಾಖಾ ಪ್ರಬಂಧಕ ಸಂದೀಪ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ಸಂದೇಶ ನೀಡಿದರು ಬುಧವಾರ ಕುಂದಾಪುರ ಸೈಂಟ್ ಮೇರಿಸ್ ಪಿ.ಯು.ಕಾಲೇಜಿನಲ್ಲಿ ಸಂಸ್ಥೆಯ ಆಶ್ರಯದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನ.15ರಿಂದ ಕುಂದಾಪುರದ ಗಾಂಧಿ ಮೈದಾನದಲ್ಲಿ ಜರಗುವ ಪಿ.ಯು.ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ "ಶೈನ್-2016" ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಸಂಚಾಲಕ ಅತೀ.ವಂ.ಫಾ.ಅನಿಲ್ ಡಿ ಸೋಜಾ ಕ್ರೀಡಾಕೂಟದ ಯಶಸ್ವಿಗೆ ಕಾಲೇಜಿನ ವಿದ್ಯಾರ್ಥಿಗಳ ಶ್ರಮ ಅಗತ್ಯವಿದೆ. ಎಲ್ಲಾ ವಿದ್ಯಾರ್ಥಿಗಳು ಈ ಕ್ರೀಡಾಕೂಟದ ಯಶಸ್ವಿಗೆ ದುಡಿಯಬೇಕು, ನಮ್ಮ ಪ್ರಾರ್ಥನೆಯೂ ನಮ್ಮಿಂದ ನೆಡೆಯುತ್ತದೆ, ಹಾಗೇ ದಾನಿಗಳ ಸಹಕಾರದಿಂದ ಕ್ರೀಡಾ ಕೂಟ ಯಶಸ್ವಿಯಾಗಲೆಂದು ಹಾರೈಸಿದರು.
ವೇದಿಕೆಯಲ್ಲಿ ಸೈಂಟ್ ಮೇರಿಸ್ ಪಿ.ಯು.ಕಾಲೇಜಿನ ಉಪಪ್ರಾಂಶುಪಾಲೆ ಮಂಜುಳಾ ನಾಯರ್, ಉಪನ್ಯಾಸಕ ವಂಸತ್ ಶೆಟ್ಟಿ, ಸೈಂಟ್ ಮೇರಿಸ್ ಪ್ರೌಢಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಭಾಸ್ಕರ್ ಗಾಣಿಗ,ಸೈಂಟ್ ಮೇರಿಸ್ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಡೊರೊತಿ ಸುವಾರಿಸ್, ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.
ಉಪನ್ಯಾಸಕ ನಾಗರಾಜ ಶೆಟ್ಟಿ ಸ್ವಾಗತಿಸಿದರು. ಪ್ರಾಂಶುಪಾಲ ಫಾ.ಪ್ರವೀಣ್ ಅಮೃತ್ ಮಾರ್ಟಿಸ್ ಪ್ರಾಸ್ತಾವನೆಗೈದರು. ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.ಉಪನ್ಯಾಸಕಿ ಶರ್ಮಿಳಾ ಎಂ.ಮಿನೇಜಸ್ ವಂದಿಸಿದರು.