ಮಂಗಳೂರು: ಮೈಸೂರಿನಲ್ಲಿ ನಡೆಯುವ ಉಪಚುನಾವಣೆ ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪಕ್ಷದ ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಿದ್ಧರಾಗಬೇಕು. ಪ್ರತಿಪಕ್ಷಗಳು ಒಗ್ಗಟ್ಟಾದರೆ ಸಿಎಂ ಮನೆಗೆ ಹೋಗಬೇಕಾದೀತು ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಸಲಹೆ ಮಾಡಿದ್ದಾರೆ.
ಗುರುವಾರ ಮಂಗಳೂರಿನ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಚುನಾವಣೆ ಎದುರಿಸಲು ಕಸರತ್ತು ಆರಂಭಿಸಿವೆ. ದೇವೇಗೌಡರು ಈಗಾಗಲೇ ಶ್ರೀನಿವಾಸ್ ಪ್ರಸಾದ್ ಪಕ್ಷೇತರರಾಗಿ ಸ್ಪರ್ಧಿಸಿದರೆ ಜೆಡಿಎಸ್ ಬೆಂಬಲಿಸುವುದಾಗಿ ಹೇಳಿದ್ದಾರೆ.
ಈ ಸಂದರ್ಭ ಸಿಎಂ ಅಹಂಕಾರ ಬಿಟ್ಟು ಜಾಣ್ಮೆಯ ಹೆಜ್ಜೆ ಇಡಬೇಕಾಗಿದೆ ಎಂದರು.ಪಕ್ಷ, ಕಾರ್ಯಕರ್ತರು ಮತ್ತು ಸರಕಾರದ ಹಿತದೃಷ್ಟಿಯಿಂದ ಸಿದ್ಧರಾಮಯ್ಯ ಕಾರ್ಯೋನ್ಮುಖರಾಗಬೇಕು. ಚುನಾವಣೆಗೆ ಯಾರನ್ನು ಬೇಕಾದರೂ ನಿಲ್ಲಿಸಲಿ; ಆದರೆ ಪಕ್ಷ ಗೆಲ್ಲಬೇಕು. ಅದು ಸಾಧ್ಯವಾಗಲ್ಲ ಎಂದಾದಲ್ಲಿ ರಾಜೀನಾಮೆ ನೀಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.