Friday 26th, April 2024
canara news

ಟಿಪ್ಪು ಜಯಂತಿಗೆ ಬಿಜೆಪಿಗರ ವಿರೋಧ ಸರಿಯಲ್ಲ; ಸಚಿವ ಪರಮೇಶ್ವರ್

Published On : 08 Nov 2016   |  Reported By : Canaranews Network


ಮಂಗಳೂರು: ಟಿಪ್ಪು ಜಯಂತಿ ಆಚರಣೆ ಸರ್ಕಾರಿ ಕಾರ್ಯಕ್ರಮ, ಈ ಕಾರ್ಯಕ್ರಮಕ್ಕೆ ಬಿಜೆಪಿಗರು ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ , ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಟಿಪ್ಪು ಜಯಂತಿಯನ್ನು ವಿರೋಧಿಸಿ ಬಿಜೆಪಿಗರು ಪ್ರತಿಭಟನೆ ಮುಂದಾಗಿದ್ದಾರೆ. ಇದು ಸರಿಯಲ್ಲ. ಟಿಪ್ಪು ಜಯಂತಿ ಆಚರಣೆ ಕುರಿತು ಹಲವು ಬಾರಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸದಂತೆ ಮನವಿ ಮಾಡಿಕೊಂಡರು.

ಟಿಪ್ಪು ಜಯಂತಿ ಆಚರಣೆ ಸಂಬಂಧ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಿಎಂ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಲಾಗಿದೆ. ಟಿಪ್ಪು ಜಯಂತಿ ಆಚರಣೆ ಸಂದರ್ಭ ಮೆರವಣಿಗೆ ಇತ್ಯಾದಿಗಳಿಗೆ ಅನುಮತಿ ನೀಡುವ ಕುರಿತು ಸ್ಥಳೀಯ ಸಂಸ್ಥೆಗಳು ನಿರ್ಧಾರ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here