ಮಂಗಳೂರು: ಟಿಪ್ಪು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ದ.ಕ.ಜಿಲ್ಲಾಧ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುವುದು. ಜಿಲ್ಲೆಯ ೫೦ ಕಡೆಗಳಲ್ಲಿ ಪೊಲೀಸ್ ಚೆಕ್ ಪೋಸ್ಟ್ ಗಳನ್ನು ತೆರೆದು ತಪಾಸಣೆ ನಡೆಸಲಾಗುವುದು ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಗುಲಾಬ್ ರಾವ್ ಬೊರಸೆ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಡಗು ಹಾಗೂ ಆಸುಪಾಸಿನ ಜಿಲ್ಲೆಗಳ ಮೂಲಕ ದುಷ್ಕರ್ಮಿಗಳ ನುಸುಳದಂತೆ ಹಾಗೂ ಜಿಲ್ಲೆಯಿಂದ ಹೊರಗೆ ದುಷ್ಕರ್ಮಿಗಳ ಚಟುವಟಿಕೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲು.
ಕಳೆದ ಬಾರಿ ಟಿಪ್ಪು ಜಯಂತಿ ಆಚರಣೆ ಸಂದರ್ಭ ಜಿಲ್ಲೆಯ ಒಟ್ಟು ೯೦ ಕಡೆಗಳಲ್ಲಿ ಅಹಿತಕರ ಘಟನೆಗಳು ನಡೆದಿದ್ದವು. ಅಂತಹ ಪ್ರದೇಶದಲ್ಲಿ ಶಾಂತಿ ಕದಡದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಕಾರ್ಯಕ್ರಮಕ್ಕೆ ಸಂಬಂಧಿಸಿ ನ.೯ ಮತ್ತು ೧೦ರಂದು ಸಂಘಟನೆಗಳಿಗೆ ಬ್ಯಾನರ್ ಹಾಕಲು ಅವಕಾಶ ಕಲ್ಪಿಸಲಾಗುವುದು. ಕೋಮುಗಲಭೆಗೆ ಪ್ರೇರಣೆ ನೀಡುವ ಹಾಗೂ ಗಲಭೆಗಳಲ್ಲಿ ಭಾಗಿಯಾಗುವ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು