ಮಂಗಳೂರು: ಅನಧಿಕೃತವಾಗಿ ತೊಕ್ಕೊಟ್ಟು ಒಳಪೇಟೆಯಲ್ಲಿ ಕಾರ್ಯಾಚರಿಸುತ್ತಿದ್ದ ಗುಜರಿ ಅಂಗಡಿ ಬೆಂಕಿ ಅನಾಹುತಕ್ಕೆ ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ಮಂಗಳವಾರ ತಡರಾತ್ರಿ ವೇಳೆ ನಡೆದಿದ್ದು, ಕಿಡಿಗೇಡಿಗಳು ಬೆಂಕಿ ಹೆಚ್ಚಿರುವ ಸಾಧ್ಯತೆಗಳಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಏಕಾಏಕಿ ಅಂಗಡಿಗೆ ಬೆಂಕಿ ತಗುಲಿ ಉರಿಯುತ್ತಿರುವುದು ಬೆಳಕಿಗೆ ಬರುತ್ತಿದ್ದಂತೆ ಸ್ಥಳದಲ್ಲಿದ್ದ ಸಾರ್ವಜನಿಕರು ಒಗ್ಗಟ್ಟಾಗಿ ಬೆಂಕಿ ನಂದಿಸಲು ಶತಪ್ರಯತ್ನ ನಡೆಸಿದರು.
ಆದ್ರೆ, ನಿನ್ನೆಯಷ್ಟೇ ಅಂಗಡಿ ಮಾಲಕ ಅಲ್ಲಿದ್ದ ಸೊತ್ತುಗಳನ್ನು ರಫ್ತು ಮಾಡಿದ್ದರಿಂದಾಗಿ ಕೇವಲ ರಟ್ಟುಗಳು ಮಾತ್ರ ಅಂಗಡಿಯಲ್ಲಿತ್ತು.ಅವೆಲ್ಲಾ ಬೆಂಕಿಗೆ ಉರಿದು ಸಂಪೂರ್ಣವಾಗಿ ನಾಶವಾಗಿದೆ. ಇದರಿಂದ ಅಂಗಡಿ ಮಾಲಕನಿಗೆ ಲಕ್ಷಾಂತರ ನಷ್ಟವುಂಟಾಗಿದೆ. ಉದ್ದೇಶಪೂರ್ವಕವಾಗಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಶಂಕೆಯಿದ್ದು, ಅಂಗಡಿಗೆ ವಿದ್ಯುತ್ ಇಲ್ಲದೆ ಇರುವುದರಿಂದ ಯಾವುದೇ ರೀತಿಯ ಶಾರ್ಟ್ ಸರ್ಕ್ಯೂಟ್ ಸಂಭವಿಸಿರಲು ಸಾಧ್ಯವಿಲ್ಲ. ಸ್ಥಳಕ್ಕೆ ಉಳ್ಳಾಲ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.