ಮಂಗಳೂರು: ತನ್ವೀರ್ ಸೇಠ್ ಅರೆನಗ್ನ ಚಿತ್ರ ವೀಕ್ಷಿಸಿದ ವಿಚಾರವಾಗಿ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರು, ತನ್ವೀರ್ ಸೇಠ್ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡದಿದ್ದರೆ, ಅವರ ಭವಿಷ್ಯವೇ ಅಂತ್ಯವಾಗಲಿದೆ.
ಅದರೊಂದಿಗೆ ಪಕ್ಷದ ಭವಿಷ್ಯವೂ ಅಂತ್ಯವಾಗುತ್ತದೆ ಎಂದು ಹೇಳಿದ್ದಾರೆ. ಸರ್ಕಾರಿ ಕಾರ್ಯಕ್ರಮೊಂದರ ವೇಳೆ ಅರೆನಗ್ನ ಚಿತ್ರ ವೀಕ್ಷಿಸಿದ ಸಚಿವ ತನ್ವೀರ್ ಸೇಠ್ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ತನ್ವೀರ್ ಸೇಠ್ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದ ಜನಾರ್ದನ ಪೂಜಾರಿ ಸಿದ್ದರಾಮಯ್ಯ ತನ್ವೀರ್ ಸೇಠ್ ಅವರನ್ನು ಸಮರ್ಥಿಸಿಕೊಳ್ಳುವುದನ್ನು ಬಿಡಲಿ ಎಂದು ಹೇಳಿದ್ದಾರೆ.