ಮಂಗಳೂರು: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟಿಯೊಂದಕ್ಕೆ ರಿಕ್ಷಾವೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ದ.ಕ.ಜಿಲ್ಲೆಯ ಕಡಬ ಕೊಡಿಂಬಾಳ ಪೇಟೆಯ ಹಾಲಿನ ಸೊಸೈಟಿ ಸಮೀಪ ಗುರುವಾರ ಸಂಜೆ ನಡೆದಿದೆ.
ಪೆಲತ್ತೋಡಿ ಧರ್ಮಪಾಲ ಗೌಡ ಎಂಬುವರು ತನ್ನ ಸ್ಕೂಟಿಯನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸಂದರ್ಭ ಕಡಬದಿಂದ ಕೋಡಿಂಬಾಳದತ್ತ ಬರುತ್ತಿದ್ದ ಅಪರಿಚಿತ ರಿಕ್ಷಾ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ನೆಲಕ್ಕೆ ಉರುಳಿದ ಧರ್ಮಪಾಲ ಗೌಡರನ್ನು ಸ್ಥಳೀಯರು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಡಬ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.