Saturday 20th, April 2024
canara news

100 ರೂ. ನೋಟುಗಳ ತೀವ್ರ ಅಭಾವ; ಶಾಯಿ ಇನ್ನೂ ಬಂದಿಲ್ಲ

Published On : 18 Nov 2016   |  Reported By : Canaranews Network


ಮಂಗಳೂರು: ಕೇಂದ್ರ ಸರಕಾರ 500 ರೂ. ಮತ್ತು 1,000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆದ ಪರಿಣಾಮ ಹಳೆಯ ನೋಟುಗಳ ವಿನಿಮಯಕ್ಕಾಗಿ ಬ್ಯಾಂಕುಗಳಲ್ಲಿ ಜನರ ಸರತಿ ಸಾಲು ಬುಧವಾರವೂ ಮುಂದುವರೆದಿದೆ.

ನೋಟು ಬದಲಾಯಿಸಲು ಬರುವವರನ್ನು ನಿಯಂತ್ರಿಸುವ ಸಲುವಾಗಿ ಬೆರಳಿಗೆ ಶಾಯಿ ಗುರುತು ಹಾಕುವ ವ್ಯವಸ್ಥೆ ಮಾಡುವುದಾಗಿ ಕೇಂದ್ರ ಸರಕಾರ ತಿಳಿಸಿದ್ದರೂ ಮಂಗಳೂರು, ಉಡುಪಿಯ ಯಾವುದೇ ಬ್ಯಾಂಕಿಗೆ ಈ ಶಾಯಿ ತಲುಪಿಲ್ಲ. ಹಾಗಾಗಿ ಬುಧವಾರ ನೋಟು ಬದಧಿಲಾಯಿಸಲು ಬಂದವರ ಬೆರಳಿಗೆ ಶಾಯಿ ಗುರುತು ಹಾಕಲಾಗಿಲ್ಲ.

ಶುಕ್ರವಾರ ಮಂಗಳೂರಿಗೆ ಈ ಶಾಯಿ ಬರುವ ಸಾಧ್ಯತೆ ಇದ್ದು, ಸೋಮವಾರದಿಂದ ಅಧಿಕೃತವಾಗಿ ಬೆರಳಿಗೆ ಶಾಯಿ ಗುರುತು ಹಾಕುವ ಪ್ರಕ್ರಿಯೆ ಅನುಷ್ಠಾನಕ್ಕೆ ಬರಲಿದೆ ಎಂದು ಬ್ಯಾಂಕಿಂಗ್ ಮೂಲಗಳು ತಿಳಿಸಿವೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here