ಮಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಕರೆ ಕೊಟ್ಟಿರುವ ಆಕ್ರೋಶ್ ದಿವಸ್ ಹೆಸರಿನ ಭಾರತ್ ಬಂದ್ ಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಬಂದ್ ಗೆ ಬೆಂಬಲ ಕಡಿಮೆಯಾಗಿದ್ದು, ಮಂಗಳೂರಿನಲ್ಲಿ ಜನಜೀವನ ಎಂದಿನಂತೆ ಇತ್ತು. ಖಾಸಗಿ ಬಸ್ ಗಳ ಓಡಾಟ, ಅಂಗಡೀಗಳು ಎಂದಿನಂತೆ ಕಾರ್ಯಾಚರಿಸಿತ್ತು.
ಕಾಂಗ್ರೆಸ್ ನಿಂದ ಪ್ರತಿಭಟನೆ
ಇನ್ನು, ಆಕ್ರೋಶ್ ದಿವಸ್ ಹಿನ್ನೆಲೆ ಕಾಂಗ್ರೆಸ್ ಪ್ರತಿಭಟನೆ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ಕೇಂದ್ರ ಸರ್ಕಾರದ ವಿರುದ್ಧ ಘೊಷಣೆ ಕೂಗಿದ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.