ಮಂಗಳೂರು: ಮಾರುತಿ ಓಮ್ನಿ ಕಾರಿನಲ್ಲಿ ಬಂದ ನಾಲ್ವರ ತಂಡ ಶಾಲೆಯೊಂದರ ವಿದ್ಯಾರ್ಥಿಯನ್ನು ಅಪಹರಣಕ್ಕೆ ಯತ್ನಿಸಿದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಈ ಸಂದರ್ಭ ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಪೊಲೀಸ್ ವೇಷಧಾರಿಗಳಾಗಿದ್ದರೆಂದು ವಿದ್ಯಾರ್ಥಿ ತಿಳಿಸಿದ್ದಾಗಿ ತಿಳಿದುಬಂದಿದೆ.
ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಓಮ್ನಿ ಕಾರಿನಲ್ಲಿದ್ದ ಯುವಕರು ತಮ್ಮೊಡನೆ ಬರುವಂತೆ ಸೂಚಿಸಿದ್ದು, ಈ ಸಂದರ್ಭ ನಿರಾಕರಿಸಿದ್ದಕ್ಕೆ ಬಲವಂತವಾಗಿ ಹಿಡಿದೆಳೆಯಲು ಪ್ರಯತ್ನಿಸಿದ್ದರು. ಆದರೆ, ವಿದ್ಯಾರ್ಥಿ ತಪ್ಪಿಸಿಕೊಂಡಿರುವುದಾಗಿ ಮಾಹಿತಿ ಲಭ್ಯವಾಗಿದೆ. ಮೂಡಬಿದಿರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಅಪಹರಣಕಾರರ ಶೋಧ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇನ್ನಷ್ಟು ವಿದ್ಯಾರ್ಥಿಗಳು ತಮ್ಮನ್ನು ಅಪಹರಿಸಲೆತ್ನಿಸಿದ ವಿಷಯದ ಬಗ್ಗೆ ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಯವರಲ್ಲಿ ಮಾಹಿತಿ ನೀಡಿರೋದು ಬೆಳಕಿಗೆ ಬಂದಿದೆ.